ಸಾರಿಗೆ ಸಚಿವ ಸ್ಥಾನಕ್ಕೆ ʼಸುವೇಂದು ಅಧಿಕಾರಿʼ ದಿಢೀರ್ ರಾಜೀನಾಮೆ
ಡಿಜಿಟಲ್ ಡೆಸ್ಕ್: ಚುನಾವಣೆಗೆ ಇನ್ನೇನು ಕೆಲವೇ ತಿಂಗಳು ಬಾಕಿ ಇರುವಾಗ್ಲೇ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರಿಗೆ ದೊಡ್ಡ ಆತಂಕವೊಂದು ಎದುರಾಗಿದೆ. ತೃಣಮೂಲ ಪಕ್ಷದ ಜತೆ ಮುನಿಸಿಕೊಂಡಿದ್ದ ಟಿಎಂಸಿ ಹಿರಿಯ ನಾಯಕ ಸುವೇಂದು ಅಧಿಕಾರಿ ತಮ್ಮ ಸಾರಿಗೆ ಖಾತೆ ಸಚಿವ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ.
ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಜಗ್ದೀಪ್ ಧನ್ಖಾರ್ ಅವರಿಗೆ ಫ್ಯಾಕ್ಸ್ ಮೂಲಕ ತಮ್ಮ ರಾಜೀನಾಮೆ ಪತ್ರವನ್ನ ಕಳುಹಿಸಿರುವ ಅಧಿಕಾರಿ, ಪತ್ರದಲ್ಲಿ ' ನಾನು ಸಾರಿಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಕೂಡಲೇ ನನ್ನ ರಾಜೀನಾಮೆಯನ್ನು ಸ್ವೀಕರಿಸಲು ನಿರ್ಧಾರ ತೆಗೆದುಕೊಳ್ಳಬೇಕು. ರಾಜ್ಯದ ಜನತೆಗೆ ಸೇವೆ ಸಲ್ಲಿಸುವ ಅವಕಾಶ ಮಾಡಿಕೊಟ್ಟಿರುವುದಾಗಿ ಅಭಿನಂದನೆ ಸಲ್ಲಿಸುತ್ತೇನೆ. ನಾನು ಪ್ರಾಮಾಣಿಕವಾಗಿ, ಕರ್ತವ್ಯ ನಿಷ್ಠೆಯಿಂದ ಕಾರ್ಯನಿರ್ವಹಿಸಿದ್ದೇನೆ' ಎಂದು ವಿವರಿಸಿದ್ದಾರೆ.
0 التعليقات: