ಪ್ರತಿಭಟನಾ ನಿರತ ರೈತರಿಗೆ ರಾಷ್ಟ್ರ ರಾಜಧಾನಿ ಪ್ರವೇಶಿಸಲು ಅವಕಾಶ
ನವದೆಹಲಿ : 'ಪ್ರತಿಭಟನಾ ನಿರತ ರೈತರಿಗೆ ರಾಷ್ಟ್ರ ರಾಜಧಾನಿಪ್ರವೇಶಿಸಲು ಅವಕಾಶ ನೀಡಲಾಗುವುದು. ಬುರಾರಿ ಪ್ರದೇಶದ ನಿರಂಕಾರಿ ಸಮಗಮ್ ಮೈದಾನದಲ್ಲಿ ಅವರು ಪ್ರತಿಭಟನೆ ನಡೆಸಲು ಅನುಮತಿ ನೀಡಲಾಗುವುದು' ಎಂದು ದೆಹಲಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಕೃಷಿ ಮಸೂದೆ ವಿರೋಧಿಸಿ ಪಂಜಾಬ್ - ಹರಿಯಾಣ ಹಾಗೂ ಸುತ್ತಮುತ್ತಲ ರಾಜ್ಯಗಳ ರೈತರು ಗುರುವಾರ ದೆಹಲಿ ಚಲೋ ಆಂದೋಲನ ಆರಂಭಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ದೆಹಲಿಯವರೆಗೆ ಪಾದಯಾತ್ರೆಯನ್ನು ಕೈಗೊಂಡಿದ್ದರು, ಆದರೆ ದೆಹಲಿಯತ್ತ ಆಗಮಿಸುತ್ತಿದ್ದ ರೈತರನ್ನು ದೆಹಲಿ ಪೊಲೀಸರು ತಡೆದಿದ್ದ ಘಟನೆ ನಡೆದಿತ್ತು.
0 التعليقات: