ಶೀಘ್ರವೇ ರಾಜ್ಯದಲ್ಲಿ `ಗೋಹತ್ಯೆ' ನಿಷೇಧ ಕಾಯ್ದೆ ಮಂಡನೆ : ಸಚಿವ ಪ್ರಭು ಚವ್ಹಾಣ್
ಬೆಂಗಳೂರು : ಪಕ್ಷದ ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಪ್ರಕಾರ ರಾಜ್ಯದಲ್ಲಿ ಗೋಹತ್ಯೆ ನಿಷೇಧ ಜಾರಿಗೆ ತರಲು ಬಿಜೆಪಿ ಸರ್ಕಾರ ಬದ್ಧವಾಗಿದ್ದು, ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುತ್ತದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡಿಸೆಂಬರ್ 7 ರಂದು ಪ್ರಾರಂಭವಾಗಲಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಮಂಡಿಸಲಾಗುವುದು. ಪರಿಷ್ಕೃತ ಮತ್ತು ಸಮಗ್ರ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದರು.
0 التعليقات: