ಆಗುಂಬೆ ಘಾಟಿ; ಭಾರಿ ವಾಹನ ಸಂಚಾರ ನಿಷೇಧ ತೆರವು: ಉಡುಪಿ ಜಿಲ್ಲಾಧಿಕಾರಿ
ಉಡುಪಿ, ಜು.8: ರಾಷ್ಟ್ರೀಯ ಹೆದ್ದಾರಿ-169ಎ ಯ ತೀರ್ಥಹಳ್ಳಿ- ಉಡುಪಿ- ಮಂಗಳೂರು ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಮಳೆಗಾಲದ ಮಳೆ ಕಡಿಮೆ ಇರುವುದರಿಂದ ಮಳೆ ಹೆಚ್ಚಾಗುವವರೆಗೆ, ಭಾರಿ ವಾಹನ ಸಂಚಾರವನ್ನು ನಿಷೇಧಿಸಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿರುವ ಆದೇಶವನ್ನು ತಾತ್ಕಾಲಿಕವಾಗಿ ತಡೆ ಹಿಡಿದು ಭಾರಿ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
0 التعليقات: