ಕೊಟ್ಟಿಗೆಗೆ ಬೆಂಕಿ: 20 ಕುರಿಗಳ ಸಜೀಹ ದಹನ
ಮಳವಳ್ಳಿ : ಕುರಿಗಳನ್ನು ಕೂಡಿ ಹಾಕಿದ್ದ ಗುಡಿಸಲಿನ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 20 ಕುರಿಗಳು ಸಜೀಹ ದಹನವಾಗಿರುವ ಘಟನೆ ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಸಿದ್ದಪ್ಪ ಎಂಬುವರಿಗೆ ಸೇರಿದ ಈ ಕುರಿಗಳನ್ನು ರಾತ್ರಿ ಗುಡಿಸಲಿನ ಕೊಟ್ಟಿಗೆಯಲ್ಲಿ ಕೂಡಿ ಹಾಕಲಾಗಿತ್ತು. ರಾತ್ರಿ ಆಕಸ್ಮಿಕವಾಗಿ ಗುಡಿಸಲಿನ ಕೊಟ್ಟಿಗೆಗೆ ಬೆಂಕಿ ಬಿದ್ದು ಕೊಟ್ಟಿಗೆಯಲ್ಲಿದ್ದ 20 ಕುರಿಗಳು ಸಜೀವ ದಹನವಾಗಿವೆ ಎಂದು ಅವರು ತಿಳಿಸಿದ್ದಾರೆ. ಕುರಿಗಳ ಸಾವಿನಿಂದ ಕಂಗಾಲಾದ ಅವರು ಪರಿಹಾರ ನೀಡುವಂತೆ ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.
0 التعليقات: