ರಾಜ್ಯಾದ್ಯಂತ 967 ಕೊರೋನ ಪ್ರಕರಣ ದೃಢ, 10 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ರವಿವಾರ 967 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 10 ಜನರು ಸೋಂಕಿಗೆ ಬಲಿಯಾಗಿದ್ದು, 921 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 29,60,131ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 37,472ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 17,028ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
10 ಸೋಂಕಿತರು ಬಲಿ: ಬೆಳಗಾವಿ 2, ಬೆಂಗಳೂರು ನಗರ-2, ದಕ್ಷಿಣ ಕನ್ನಡ 2, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ತಲಾ ಒಬ್ಬರು ಸೇರಿ ಒಟ್ಟು 10 ಮಂದಿ ಅಸುನೀಗಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 967 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಳ್ಳಾರಿ 6, ಬೆಳಗಾವಿ 15, ಬೆಂಗಳೂರು ಗ್ರಾ. 14, ಬೆಂಗಳೂರು ನಗರ 310, ಚಾಮರಾಜನಗರ 6, ಚಿಕ್ಕಮಗಳೂರು 37, ಚಿತ್ರದುರ್ಗ 10, ದಕ್ಷಿಣ ಕನ್ನಡ 141, ದಾವಣಗೆರೆ 3, ಧಾರವಾಡ 5, ಹಾಸನ 61, ಕಲಬುರಗಿ 7, ಕೊಡಗು 74, ಕೋಲಾರ 2, ಕೊಪ್ಪಳ 1, ಮಂಡ್ಯ 14, ಮೈಸೂರು 55, ಶಿವಮೊಗ್ಗ 32, ತುಮಕೂರು 41, ಉಡುಪಿ 96, ಉತ್ತರ ಕನ್ನಡ ಜಿಲ್ಲೆಯಲ್ಲಿ 32 ಪ್ರಕರಣ ಪತ್ತೆಯಾಗಿವೆ.
0 التعليقات: