ಕಾಂಗ್ರೆಸ್ ನ 14 ಮಂದಿ ವಿಧಾನ ಪರಿಷತ್ ಸದಸ್ಯರ ಅಮಾನತು
ಬೆಂಗಳೂರು: ಸಭಾಪತಿಯ ಆದೇಶ ಉಲ್ಲಂಘಿಸಿದ 14 ಮಂದಿ ಸದಸ್ಯರ ಅಮಾನತುಗೊಳಿಸಿ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ.
ಸಚಿವ ಭೈರತಿ ಬಸವರಾಜ ವಿರುದ್ಧ ದಾಖಲಾ ಭೂ ಕಬಳಿಕೆ ಆರೋಕ್ಕೆ ಸಂಬಂಧಿಸಿ ದಾಖಲಾಗಿರುವ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಎಸ್.ಆರ್ ಪಾಟೀಲ್ ಪ್ರಸ್ತಾಪಿಸಿ ಈ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಒತ್ತಾಯಿಸಿದಾಗ ಸಭಾಪತಿ ಅವರು ನಿರಾಕರಿಸಿದರು.
ಈ ವೇಳೆ ಸದನದ ಬಾವಿಗಿಳಿದು ಧರಣಿ ನಡೆಸಿದ್ದ ಎಸ್.ಆರ್. ಪಾಟೀಲ್, ಪಿ.ಆರ್. ರಮೇಶ್, ನಾರಾಯಣಸ್ವಾಮಿ, ಬಿ.ಕೆ. ಹರಿಪ್ರಸಾದ್, ಪ್ರತಾಪ್ಚಂದ್ರ ಶೆಟ್ಟಿ, ಯು.ಬಿ. ವೆಂಕಟೇಶ್, ವೀಣಾ ಅಚ್ಚಯ್ಯ, ಸಿ.ಎಂ. ಇಬ್ರಾಹಿಂ ಸೇರಿದಂತೆ 14 ಕಾಂಗ್ರೆಸ್ ಸದಸ್ಯರ ಅಮಾನತುಗೊಳಿಸಲಾಗಿದೆ ಸೇರಿದಂತೆ ಕಾಂಗ್ರೆಸ್ ನ 14 ಮಂದಿ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತುಗೊಳಿಸಿ ಆದೇಶಿಸಲಾಗಿದೆ.
0 التعليقات: